Hosea 4:6 ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.
Hosea 4:6 in Other Translations
King James Version (KJV) My people are destroyed for lack of knowledge: because thou hast rejected knowledge, I will also reject thee, that thou shalt be no priest to me: seeing thou hast forgotten the law of thy God, I will also forget thy children.
American Standard Version (ASV) My people are destroyed for lack of knowledge: because thou hast rejected knowledge, I will also reject thee, that thou shalt be no priest to me: seeing thou hast forgotten the law of thy God, I also will forget thy children.
Bible in Basic English (BBE) Destruction has overtaken my people because they have no knowledge; because you have given up knowledge, I will give you up, so that you will be no priest to me, because you have not kept in mind the law of your God, I will not keep your children in my memory.
Darby English Bible (DBY) My people are destroyed for lack of knowledge; for thou hast rejected knowledge, and I will reject thee, that thou shalt be no priest to me; seeing thou hast forgotten the law of thy God, I also will forget thy children.
World English Bible (WEB) My people are destroyed for lack of knowledge. Because you have rejected knowledge, I will also reject you, That you may be no priest to me. Because you have your God's law, I will also forget your children.
Young's Literal Translation (YLT) Cut off have been My people for lack of knowledge, Because thou knowledge hast rejected, I reject thee from being priest to Me, And thou forgettest the law of thy God, I forget thy sons, I also!
Read Full Chapter :
Hosea 4
Cross Reference
ಯೆಶಾಯ 5:13
ಆದಕಾರಣ ನನ್ನ ಪ್ರಜೆಯು ಜ್ಞಾನಹೀನರಾದದರಿಂದ ಅವರು ಸೆರೆಗೆ ಹೋದರು; ಅವರ ಘನವಂತರು ಹಸಿಯು ವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವದು.
ಙ್ಞಾನೋಕ್ತಿಗಳು 19:2
ತಿಳುವಳಿಕೆಯಿಲ್ಲದ ಪ್ರಾಣವು ಯುಕ್ತವಲ್ಲ; ತನ್ನ ಪಾದಗಳಿಂದ ದುಡುಕುವ ವನು ಪಾಪಮಾಡುತ್ತಾನೆ.
ಯೆಶಾಯ 17:10
ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು ನಿನ್ನ ಬಲದ ಬಂಡೆ ಯನ್ನು ನೆನಸದೆ ಇದ್ದದರಿಂದ ನೀನು ರಮ್ಯವಾದ ಗಿಡಗಳನ್ನು ಸಸಿಯನ್ನು ನೆಡುವಿ, ಅಪರೂಪವಾದ ಸಸಿಗಳನ್ನು ಹಾಕುವಿ.
ಹೋಶೇ 8:14
ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.
2 ಪೂರ್ವಕಾಲವೃತ್ತಾ 15:3
ಆತನನ್ನು ಬಿಟ್ಟುಬಿಟ್ಟರೆ ಆತನು ನಿಮ್ಮನ್ನು ಬಿಟ್ಟುಬಿಡುವನು ಅಂದನು. ಬಹುಕಾಲ ಇಸ್ರಾಯೇಲ್ಯರು ನಿಜವಾದ ದೇವರಿಲ್ಲದೆ ಬೋಧಿಸುವ ಯಾಜಕನಿಲ್ಲದೆ ನ್ಯಾಯಪ್ರಮಾಣವಿಲ್ಲದೆ ಇದ್ದರು.
ಯೆಶಾಯ 1:3
ಎತ್ತು ತನ್ನ ಯಜಮಾನನನ್ನು ಮತ್ತು ಕತ್ತೆಯು ತನ್ನ ಒಡೆ ಯನ ಕೊಟ್ಟಿಗೆಯನ್ನು ತಿಳಿದಿರುವವು; ಆದರೆ ಇಸ್ರಾ ಯೇಲಿಗೆ ತಿಳಿದಿಲ್ಲ; ನನ್ನ ಜನರು ಆಲೋಚಿಸುವ ದಿಲ್ಲ.
ಹೋಶೇ 4:1
ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.
ಹೋಶೇ 13:6
ಅವರ ಆಹಾರದ ಪ್ರಕಾರ ತೃಪ್ತರಾದರು, ಅದರಿಂದ ಅವರ ಹೃದಯಗಳು ಉಬ್ಬಿಕೊಂಡಿತು; ಆದಕಾರಣ ಅವರು ನನ್ನನ್ನು ಮರೆತುಬಿಟ್ಟರು.
ಜೆಕರ್ಯ 11:15
ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಇನ್ನು ಬುದ್ಧಿಹೀನವಾದ ಕುರುಬನ ಆಯುಧಗ ಳನ್ನು ತಕ್ಕೋ.
ಮತ್ತಾಯನು 15:14
ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
2 ಕೊರಿಂಥದವರಿಗೆ 4:3
ನಮ್ಮ ಸುವಾರ್ತೆಯು ಮರೆಯಾಗಿರುವದಾದರೆ ಅದು ತಪ್ಪಿಹೋದವರಿಗೆ ಮರೆಯಾಗಿದೆ.
ಕೀರ್ತನೆಗಳು 119:61
ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು; ಆದರೂ ನಿನ್ನ ನ್ಯಾಯಪ್ರಮಾಣವನ್ನು ನಾನು ಮರೆತುಬಿಡಲಿಲ್ಲ.
ಕೀರ್ತನೆಗಳು 119:139
ನನ್ನ ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಡುವದರಿಂದ ನನ್ನ ಆಸಕ್ತಿಯು ನನ್ನನ್ನು ದಹಿಸಿಯದೆ.
ಯೆರೆಮಿಯ 2:8
ಯಾಜಕರು--ಕರ್ತನು ಎಲ್ಲಿದ್ದಾನೆ ಎಂದು ಹೇಳಲಿಲ್ಲ; ನ್ಯಾಯ ಪ್ರಮಾಣವನ್ನು ಉಪಯೋಗಿಸುವವರು ನನ್ನನ್ನು ತಿಳಿಯಲಿಲ್ಲ; ಪಾಲಕರು ನನಗೆ ವಿರೋಧವಾಗಿ ದ್ರೋಹಮಾಡಿದರು; ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು; ಪ್ರಯೋಜನವಿಲ್ಲದವುಗಳನ್ನು ಹಿಂದ ಟ್ಟಿದರು.
ಹೋಶೇ 2:13
ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಮಿಂಡರ ಹಿಂದೆ ಹೋಗಿ ಬಾಳ್ ದೇವತೆಗಳ ದಿವಸಗಳಲ್ಲಿ ಧೂಪ ಸುಟ್ಟಿದ್ದಕ್ಕೆ ನಾನು ಅವಳನ್ನು ದಂಡಿಸುವೆನು ಎಂದು ಕರ್ತನು ಹೇಳುತ್ತಾನೆ.
ಹೋಶೇ 4:12
ನನ್ನ ಜನರು ಮರದ ತುಂಡುಗಳಿಗೆ ಆಲೋಚನೆ ಕೇಳುತ್ತಾರೆ; ಅವರ ಕೋಲು ಅವರಿಗೆ ತಿಳಿಸುತ್ತದೆ. ವ್ಯಭಿಚಾರದ ಆತ್ಮಗಳು ಅವರನ್ನು ತಪ್ಪಿಸಿಬಿಟ್ಟಿದೆ; ಅವರು ತಮ್ಮ ದೇವರ ಕೈಕೆಳಗಿರದೆ ವ್ಯಭಿಚಾರ ಮಾಡಿದ್ದಾರೆ.
ಹೋಶೇ 6:6
ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ.
ಹೋಶೇ 8:1
ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ, ಅವರು ನನ್ನ ಒಡಂಬಡಿಕೆಯನ್ನು ವಿಾರಿ ನನ್ನ ನ್ಯಾಯಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಅವನು ಹದ್ದಿನ ಹಾಗೆ ಕರ್ತನ ಆಲಯಕ್ಕೆ ವಿರುದ್ಧವಾಗಿ ಬರುತ್ತಾನೆ.
ಹೋಶೇ 8:12
ನಾನು ನನ್ನ ನ್ಯಾಯಪ್ರಮಾಣದ ದೊಡ್ಡ ಸಂಗತಿ ಗಳನ್ನು ಅವನಿಗೆ ಬರೆದಿದ್ದೇನೆ; ಆದರೆ ಅವುಗಳು ಅನ್ಯವಾದವುಗಳೆಂದು ಎಣಿಸಲ್ಪಟ್ಟಿವೆ.
ಜೆಕರ್ಯ 11:8
ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.
ಮಲಾಕಿಯ 2:1
ಈಗ ಓ ಯಾಜಕರೇ, ಈ ಆಜ್ಞೆ ನಿಮಗಾಗಿ ಅದೆ.
ಮಲಾಕಿಯ 2:7
ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
ಮತ್ತಾಯನು 1:6
ಇಷಯನಿಂದ ಅರಸನಾದ ದಾವೀದನು ಹುಟ್ಟಿದನು. ಅರಸನಾದ ದಾವೀದನಿಂದ ಊರೀಯನ ಹೆಂಡತಿ ಯಾಗಿದ್ದವಳಲ್ಲಿ ಸೊಲೊಮೋನನು ಹುಟ್ಟಿದನು;
ಮತ್ತಾಯನು 15:3
ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಯಾಕೆ ಮಾರುತ್ತೀರಿ?
ಮತ್ತಾಯನು 15:8
ಆದೇ ನಂದರೆ-- ಈ ಜನರು ತಮ್ಮ ಬಾಯಿಂದ ನನ್ನನ್ನು ಸಮಾಪಿಸಿ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.
ಮತ್ತಾಯನು 23:16
ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ.
ಮಾರ್ಕನು 12:8
ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷೇತೋಟದ ಹೊರಗೆ ಬಿಸಾಡಿದರು.
ಲೂಕನು 20:16
ಅವನು ಬಂದು ಈ ಒಕ್ಕಲಿಗರನ್ನು ಸಂಹರಿಸಿ ದ್ರಾಕ್ಷೇತೋಟ ವನ್ನು ಬೇರೆಯವರಿಗೆ ಕೊಡುವನು ಅಂದನು. ಅವರು ಇದನ್ನು ಕೇಳಿ--ಹಾಗೆ ಎಂದಿಗೂ ಆಗಬಾರದು ಅಂದರು.
ಮತ್ತಾಯನು 21:41
ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
1 ಸಮುವೇಲನು 2:12
ಆದರೆ ಏಲಿಯ ಕುಮಾರರು ಕರ್ತನನ್ನು ಅರಿಯದೆ ಬೆಲಿಯಾಳನ ಮಕ್ಕಳಾಗಿದ್ದರು.
1 ಸಮುವೇಲನು 2:28
ನನ್ನ ಯಜ್ಞ ವೇದಿಯ ಮೇಲೆ ಬಲಿಯನ್ನು ಅರ್ಪಿಸುವದಕ್ಕೂ ಧೂಪವನ್ನು ಸುಡುವದಕ್ಕೂ ನನ್ನ ಮುಂದೆ ಏಫೋ ದನ್ನು ಧರಿಸಿಕೊಂಡಿರುವದಕ್ಕೂ ನಾನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ನನಗೆ ಯಾಜಕನಾಗಿರ ಬೇಕೆಂದು ನಾನು ಅವನನ್ನು ಆದುಕೊಳ್ಳಲಿಲ್ಲವೋ? ನಿನ್ನ ತಂದೆಯ ಮನೆಗೆ ಇಸ್ರಾಯೇಲ್ ಮಕ್ಕಳು ಮಾಡುವ ದಹನಬಲಿಗಳನ್ನೆಲ್ಲಾ ಕೊಡಲಿಲ್ಲವೋ?
1 ಸಮುವೇಲನು 3:12
ನಾನು ಏಲಿಯ ಮನೆಯನ್ನು ಕುರಿತು ಹೇಳಿದ್ದನ್ನೆಲ್ಲಾ ಅವರಿಗೆ ಆ ದಿವಸದಲ್ಲಿ ಮಾಡುತ್ತೇನೆ; ನಾನು ಆರಂಭಿಸಿದ ಹಾಗೆ ಅಂತ್ಯ ವನ್ನು ಮಾಡುವೆನು.
2 ಅರಸುಗಳು 17:16
ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ
ಙ್ಞಾನೋಕ್ತಿಗಳು 1:30
ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ
ಯೆಶಾಯ 3:12
ನನ್ನ ಪ್ರಜೆಗಳನ್ನೋ ಹುಡುಗರು ಅವರನ್ನು ಭಾಧಿಸುವರು, ಅವರನ್ನು ಆಳುವವರು ಹೆಂಗಸರು. ಓ ನನ್ನ ಪ್ರಜೆಗಳೇ, ನಿಮ್ಮನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆ ಯುವ ದಾರಿಯನ್ನು ಹಾಳುಮಾಡಿದ್ದಾರೆ.
ಯೆಶಾಯ 27:11
ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
ಯೆಶಾಯ 28:7
ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.
ಯೆಶಾಯ 45:20
ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
ಯೆಶಾಯ 56:10
ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.
ಯೆರೆಮಿಯ 4:22
ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
ಯೆರೆಮಿಯ 5:21
ಮೂಢರೇ, ಬುದ್ಧಿಹೀನ ಜನರೇ, ಕಣ್ಣುಗಳಿದ್ದು ನೋಡದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.
ಯೆರೆಮಿಯ 8:7
ಹೌದು, ಆಕಾಶ ದಲ್ಲಿ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿ ಯುತ್ತದೆ; ಪಾರಿವಾಳವೂ ಬಾನಕ್ಕಿಯೂ ಕೊಕ್ಕರೆಯೂ ತಾವು ಬರತಕ್ಕ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಕರ್ತನ ನ್ಯಾಯ ತೀರ್ಪನ್ನು ಅರಿಯರು.
ಯೆರೆಮಿಯ 5:3
ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.
ಯೋಬನು 36:12
ಅವರು ವಿಧೇಯರಾಗದಿದ್ದರೆ ಕತ್ತಿಯಿಂದ ನಾಶವಾಗುವರು; ತಿಳಿಯದೆ ಸಾಯುವರು.