Isaiah 11:4 ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
Isaiah 11:4 in Other Translations
King James Version (KJV) But with righteousness shall he judge the poor, and reprove with equity for the meek of the earth: and he shall smite the earth: with the rod of his mouth, and with the breath of his lips shall he slay the wicked.
American Standard Version (ASV) but with righteousness shall he judge the poor, and decide with equity for the meek of the earth; and he shall smite the earth with the rod of his mouth; and with the breath of his lips shall he slay the wicked.
Bible in Basic English (BBE) But he will do right in the cause of the poor, and give wise decisions for those in the land who are in need; and the rod of his mouth will come down on the cruel, and with the breath of his lips he will put an end to the evil-doer.
Darby English Bible (DBY) but with righteousness shall he judge the poor, and reprove with equity the meek of the earth: and he shall smite the earth with the rod of his mouth, and with the breath of his lips shall he slay the wicked.
World English Bible (WEB) but with righteousness shall he judge the poor, and decide with equity for the humble of the earth; and he shall strike the earth with the rod of his mouth; and with the breath of his lips shall he kill the wicked.
Young's Literal Translation (YLT) And he hath judged in righteousness the poor, And decided in uprightness for the humble of earth, And hath smitten earth with the rod of his mouth, And with the breath of his lips he putteth the wicked to death.
Read Full Chapter :
Isaiah 11
Cross Reference
ಯೋಬನು 4:9
ದೇವರ ಸಿಡಿತದಿಂದ ಅವರು ನಾಶವಾಗುತ್ತಾರೆ. ಆತನ ಮೂಗಿನ ಉಸಿರಿ ನಿಂದ ಅವರು ಕ್ಷಯಿಸಿಹೋಗುತ್ತಾರೆ,
ಮಲಾಕಿಯ 4:6
ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
ಯೆಶಾಯ 61:1
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
2 ಥೆಸಲೊನೀಕದವರಿಗೆ 2:8
ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
ಕೀರ್ತನೆಗಳು 2:9
ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.
ಯೆಶಾಯ 30:33
ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
ಯೆಶಾಯ 32:1
ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು.
ಕೀರ್ತನೆಗಳು 45:6
ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ.
ತೀತನಿಗೆ 3:2
ಯಾರ ವಿಷಯವಾಗಿಯೂ ಕೆಟ್ಟ ಮಾತನ್ನಾಡದವರೂ ಜಗಳವಾಡದವರೂ ಆಗಿದ್ದು ಸಾಧು ಸ್ವಭಾವವುಳ್ಳವರಾಗಿ ಎಲ್ಲಾ ಮನುಷ್ಯರಿಗೆ ಪೂರ್ಣ ಸಾತ್ವಿಕತ್ವವನ್ನು ತೋರಿಸಬೇಕೆಂತಲೂ ಅವ ರಿಗೆ ಜ್ಞಾಪಕಮಾಡು.
ಪ್ರಕಟನೆ 19:15
ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
ಯೆರೆಮಿಯ 33:15
ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು; ಆತನು ದೇಶದಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸುವನು.
ಕೀರ್ತನೆಗಳು 72:12
ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು.
ಯೆಶಾಯ 9:7
ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
ಯೆಶಾಯ 16:5
ಕರುಣೆಯಲ್ಲಿ ಸಿಂಹಾಸನವು ಸ್ಥಾಪಿಸಲ್ಪಡುವದು; ನ್ಯಾಯತೀರಿಸು ವವನೂ ನ್ಯಾಯವನ್ನು ಹುಡುಕುವವನೂ ನೀತಿಗೋ ಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿ ಅದರ ಮೇಲೆ ಸತ್ಯದಲ್ಲಿ ಕೂತುಕೊಳ್ಳುವನು.
ಯೆಶಾಯ 29:19
ದೀನರ ಸಂತೋಷವು ಕರ್ತನಲ್ಲಿ ಹೆಚ್ಚಾಗುವದು, ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸು ವರು.
ಅಪೊಸ್ತಲರ ಕೃತ್ಯಗ 9:1
ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ
2 ಕೊರಿಂಥದವರಿಗೆ 10:1
ನಿಮ್ಮೆದುರಿನಲ್ಲಿರುವಾಗ ದೀನನಾಗಿಯೂ ದೂರದಲ್ಲಿರುವಾಗ ನಿಮ್ಮ ಕಡೆಗೆ ದಿಟ್ಟತನ ತೋರಿಸುವವನಾಗಿಯೂ ಆಗಿದ್ದಾನೆಂದು ನೀವು ತಿಳಿಯುವ ಪೌಲನೆಂಬ ನಾನೇ ಕ್ರಿಸ್ತನ ಶಾಂತ ಮನಸ್ಸಿನಿಂದಲೂ ಸಾತ್ವಿಕತ್ವದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಗಲಾತ್ಯದವರಿಗೆ 5:23
ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.
2 ಸಮುವೇಲನು 8:15
ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು.
ಪ್ರಕಟನೆ 1:16
ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
ಪ್ರಕಟನೆ 2:16
ಆದದರಿಂದ ಮಾನಸಾಂತರಪಡು, ಇಲ್ಲದಿದ್ದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನನ್ನ ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧ ಮಾಡುವೆನು.
ಪ್ರಕಟನೆ 19:11
ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;
ಯಾಕೋಬನು 3:13
ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.
2 ಸಮುವೇಲನು 23:2
ಕರ್ತನ ಆತ್ಮನು ನನ್ನಿಂದ ಮಾತನಾಡಿದನು; ಆತನ ವಾಕ್ಯವು ನನ್ನ ಬಾಯಿಯಲ್ಲಿತ್ತು.
1 ಅರಸುಗಳು 10:8
ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾ ಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯವಂತರು.
ಕೀರ್ತನೆಗಳು 18:8
ಆತನ ಮೂಗಿನಿಂದ ಹೊಗೆ ಎದ್ದು ಆತನ ಬಾಯಿಯೊಳಗಿಂದ ಬೆಂಕಿ ದಹಿಸಿತು; ಕೆಂಡಗಳು ಅದರಿಂದ ಉರಿದವು.
ಕೀರ್ತನೆಗಳು 72:1
ಓ ದೇವರೇ, ನಿನ್ನ ನ್ಯಾಯತೀರ್ಪುಗಳನ್ನು ಅರಸನಿಗೂ ನೀತಿಯನ್ನು ಅರಸನ ಮಗನಿಗೂ ಕೊಡು.
ಕೀರ್ತನೆಗಳು 82:2
ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ.
ಕೀರ್ತನೆಗಳು 110:2
ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು.
ಙ್ಞಾನೋಕ್ತಿಗಳು 31:8
ಮೂಕರಿಗಾಗಿಯೂ ನಾಶವಾಗುವದಕ್ಕೆ ನೇಮಿಸಲ್ಪಟ್ಟ ವರೆಲ್ಲರಿಗಾಗಿಯೂ ನಿನ್ನ ಬಾಯನ್ನು ತೆರೆ.
ಯೆಶಾಯ 1:17
ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ.
ಯೆಶಾಯ 3:14
ಕರ್ತನು ತನ್ನ ಪ್ರಜೆಯಾದ ಪೂರ್ವಿಕರ ಸಂಗಡಲೂ ಅವರ ಅಧಿ ಪತಿಗಳ ಸಂಗಡಲೂ ನ್ಯಾಯತೀರಿಸಲು ಪ್ರವೇಶಿಸು ವನು; ನೀವು ದ್ರಾಕ್ಷೇ ತೋಟವನ್ನು ತಿಂದುಬಿಟ್ಟಿದ್ದೀರಿ; ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.
ಯೆರೆಮಿಯ 5:28
ಕೊಬ್ಬಿದ್ದಾರೆ, ಪ್ರಕಾಶಿಸುತ್ತಾರೆ; ಹೌದು, ದುಷ್ಟರ ಕೃತ್ಯಗಳಿಗಿಂತ ವಿಾರಿ ಹೋಗಿದ್ದಾರೆ. ವ್ಯಾಜ್ಯ ವನ್ನು, ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವದಿಲ್ಲ; ಆದಾಗ್ಯೂ ಅವರು ಸಫಲವಾಗುತ್ತಾರೆ; ಬಡವರ ನ್ಯಾಯವನ್ನು ತೀರಿಸರು.
ಯೆರೆಮಿಯ 23:5
ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.
ಚೆಫನ್ಯ 2:3
ಆತನ ನ್ಯಾಯತೀರ್ಪುಗಳನ್ನು ಮಾಡುವ ಲೋಕದ ದೀನರೆಲ್ಲರೇ, ಕರ್ತನನ್ನು ಹುಡುಕಿರಿ, ನೀತಿ ಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ; ಒಂದು ವೇಳೆ ಕರ್ತನ ಕೋಪದ ದಿನದಲ್ಲಿ ಮರೆಯಾಗುವಿರಿ.
ಮತ್ತಾಯನು 5:5
ಸಾತ್ವಿಕರು ಧನ್ಯರು; ಯಾಕಂದರೆ ಅವರು ಭೂಮಿಯನ್ನು ಬಾಧ್ಯವಾಗಿ ಹೊಂದುವರು.
ಮತ್ತಾಯನು 11:5
ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.