Cross Reference
1 ಯೋಹಾನನು 4:20
ಒಬ್ಬನು--ನಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿ ತನ್ನ ಸಹೋದರನನ್ನು ಹಗೆ ಮಾಡಿದರೆ ಅವನು ಸುಳ್ಳುಗಾರನಾಗಿದ್ದಾನೆ. ಯಾಕಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು ಕಾಣದಿರುವ ದೇವರನ್ನು ಅವನು ಹೇಗೆ ಪ್ರೀತಿಸಾನು?
1 ಯೋಹಾನನು 3:14
ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
ಯಾಕೋಬನು 3:6
ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ.
1 ಯೋಹಾನನು 2:9
ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.
ಮತ್ತಾಯನು 10:28
ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
ಮತ್ತಾಯನು 26:59
ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು.
ಮತ್ತಾಯನು 18:8
ಆದದರಿಂದ ನಿನ್ನ ಕೈಯಾಗಲೀ ಕಾಲಾಗಲೀ ನಿನ್ನನ್ನು ಅಭ್ಯಂತರಪಡಿಸಿದರೆ ಅವುಗಳನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕೈಯುಳ್ಳವನಾಗಿ ಇಲ್ಲವೆ ಎರಡು ಕಾಲುಳ್ಳವನಾಗಿ ನಿತ್ಯವಾದ ಬೆಂಕಿಗೆ ಹಾಕಲ್ಪಡುವದಕ್ಕಿಂತ ಕುಂಟ ನಾಗಿ ಇಲ್ಲವೆ ಊನನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.
ಮತ್ತಾಯನು 25:41
ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
ಮಾರ್ಕನು 14:55
ಪ್ರಧಾನಯಾಜಕರೂ ನ್ಯಾಯಸಭೆಯವ ರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನಿಗೆ ವಿರೋಧವಾಗಿ ಸಾಕ್ಷಿಯನ್ನು ಹುಡುಕಿ ಏನೂ ಕಂಡು ಕೊಳ್ಳಲಿಲ್ಲ.
ಮಾರ್ಕನು 15:1
ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು.
ಲೂಕನು 12:5
ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
ಲೂಕನು 16:23
ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.
ಯೋಹಾನನು 11:47
ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?
ರೋಮಾಪುರದವರಿಗೆ 12:10
ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ.
ಎಫೆಸದವರಿಗೆ 4:26
ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;
ಎಫೆಸದವರಿಗೆ 4:31
ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.
1 ಪೇತ್ರನು 2:23
ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
1 ಪೇತ್ರನು 3:9
ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
ಪ್ರಕಟನೆ 20:14
ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.
ಧರ್ಮೋಪದೇಶಕಾಂಡ 15:11
ಬಡವರು ದೇಶದಲ್ಲಿ ಇಲ್ಲದೆ ಹೋಗುವದಿಲ್ಲ: ಆದದರಿಂದನಿನ್ನ ಸಹೋದರನಿಗೂ ದರಿದ್ರನಿಗೂ ಬಡವನಿಗೂ ದೇಶದಲ್ಲಿ ನಿನ್ನ ಕೈಯನ್ನು ವಿಶಾಲವಾಗಿ ತೆರೆಯ ಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
ಕೀರ್ತನೆಗಳು 7:4
ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ,
ಮತ್ತಾಯನು 10:17
ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು.
ಯೆರೆಮಿಯ 17:11
ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿ ಕೊಳ್ಳುವ ಹಾಗೆ ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಇದ್ದಾನೆ; ಅವನು ತನ್ನ ಮದ್ಯ ಪ್ರಾಯದಲ್ಲಿ ಅದನ್ನು ಬಿಡುವನು; ತನ್ನ ಅಂತ್ಯದಲ್ಲಿ ಅವನು ಮೂರ್ಖನಾಗಿರುವನು.
ಪ್ರಲಾಪಗಳು 3:52
ನನ್ನ ಶತ್ರುಗಳು ಕಾರಣವಿಲ್ಲದೆ ಪಕ್ಷಿಯಂತೆ ನನ್ನನ್ನು ಕಠೋರವಾಗಿ ಹಿಂದಟ್ಟಿ ಬೇಟೆಯಾಡಿದರು.
ದಾನಿಯೇಲನು 2:12
ಇದರಿಂದ ಅರಸನು ಕೋಪವುಳ್ಳವನಾಗಿ ಮಹಾರೌದ್ರದಿಂದ ಬಾಬೆಲಿನಲ್ಲಿ ರುವ ಎಲ್ಲಾ ಜ್ಞಾನಿಗಳನ್ನು ನಾಶಮಾಡಬೇಕೆಂದು ಆಜ್ಞಾ ಪಿಸಿದನು.
ದಾನಿಯೇಲನು 3:13
ಆಗ ನೆಬೂಕದ್ನೆಚ್ಚರನು ಕೋಪವುಳ್ಳವನಾಗಿಯೂ ರೌದ್ರ ವುಳ್ಳವನಾಗಿಯೂ ಶದ್ರಕ್ ಮೇಷಕ್ ಅಬೇದ್ ನೆಗೋರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆ ತಂದರು.
ದಾನಿಯೇಲನು 3:19
ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್ ಮೇಷಕ್ಅಬೇದ್ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.
ಓಬದ್ಯ 1:10
ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಬಲಾತ್ಕಾರದ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚು ವದು; ನೀನು ಎಂದೆಂದಿಗೂ ಕಡಿದುಹಾಕಲ್ಪಡುವಿ.
ಓಬದ್ಯ 1:12
ಆದರೆ ನಿನ್ನ ಸಹೋದರನ ದಿನದಲ್ಲಿ ಅವನು ಅನ್ಯನಾದ ದಿನದಲ್ಲಿ ನೀನು ನೋಡಬಾರ ದಾಗಿತ್ತು; ಯೆಹೂದನ ಮಕ್ಕಳ ಮೇಲೆ ಅವರ ನಾಶನದ ದಿವಸದಲ್ಲಿ ಸಂತೋಷಿಸಬಾರದಾಗಿತ್ತು; ಕಷ್ಟದ ದಿನದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು;
ಮತ್ತಾಯನು 3:17
ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
ಮತ್ತಾಯನು 5:23
ಆದದರಿಂದ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಬಳಿಗೆ ತಂದಾಗ ನಿನಗೆ ವಿರೋಧ ವಾದದ್ದು ನಿನ್ನ ಸಹೋದರನಿಗೆ ಇದೆಯೆಂದು ನೆನಪಿಗೆ ಬಂದರೆ
ಮತ್ತಾಯನು 5:28
ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.
ಮತ್ತಾಯನು 5:34
ಆದರೆ ನಾನು ನಿಮಗೆ ಹೇಳುವದೇನಂದರೆ--ಎಷ್ಟು ಮಾತ್ರಕ್ಕೂ ಅಣೆಯನ್ನು ಇಡಬೇಡ. ಪರಲೋಕದ ಮೇಲೆ ಬೇಡ; ಯಾಕಂದರೆ ಅದು ದೇವರ ಸಿಂಹಾಸನವು.
ಮತ್ತಾಯನು 5:44
ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
ಮತ್ತಾಯನು 11:18
ಯಾಕಂದರೆ ಯೋಹಾನನು ತಿನ್ನದೆಯೂ ಕುಡಿಯದೆಯೂ ಬಂದನು. ಅದಕ್ಕೆ ಅವರು--ಅವನಿಗೆ ದೆವ್ವ ಹಿಡಿದಿದೆ ಅನ್ನುತ್ತಾರೆ.
ಮತ್ತಾಯನು 12:24
ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.
ಮತ್ತಾಯನು 17:5
ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
ಮತ್ತಾಯನು 18:21
ತರುವಾಯ ಪೇತ್ರನು ಆತನ ಬಳಿಗೆ ಬಂದು--ಕರ್ತನೇ, ನನ್ನ ಸಹೋದರನು ನನಗೆ ವಿರೋಧ ವಾಗಿ ಪಾಪಮಾಡಿದರೆ ನಾನು ಎಷ್ಟು ಸಾರಿ ಅವನಿಗೆ ಕ್ಷಮಿಸಬೇಕು? ಏಳು ಸಾರಿಯೋ ಎಂದು ಕೇಳಿದನು.
ಮತ್ತಾಯನು 18:35
ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.
ಮತ್ತಾಯನು 23:15
ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ.
ಮತ್ತಾಯನು 23:33
ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?
ಮಾರ್ಕನು 9:43
ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;
ಯೋಹಾನನು 7:20
ಅದಕ್ಕೆ ಜನರು ಪ್ರತ್ಯುತ್ತರವಾಗಿ--ನಿನಗೆ ದೆವ್ವ ಹಿಡಿದಿದೆ; ನಿನ್ನನ್ನು ಕೊಲ್ಲುವದಕ್ಕೆ ನೋಡು ವವರು ಯಾರು ಅಂದರು.
ಯೋಹಾನನು 8:48
ಆಗ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ನೀನು ಸಮಾರ್ಯನು ಮತ್ತು ನಿನಗೆ ದೆವ್ವ ಹಿಡಿದದೆ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಿದರು.
ಯೋಹಾನನು 15:25
ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
ಅಪೊಸ್ತಲರ ಕೃತ್ಯಗ 3:20
ಇದಲ್ಲದೆ ಮೊದಲು ನಿಮಗೆ ಸಾರಲ್ಪ ಟ್ಟಂಥ ಯೇಸು ಕ್ರಿಸ್ತನನ್ನು ಆತನು ಕಳುಹಿಸುವನು.
ಅಪೊಸ್ತಲರ ಕೃತ್ಯಗ 5:27
ಅವರು ಅಪೊಸ್ತಲ ರನ್ನು ಕರತಂದು ಆಲೋಚನಾಸಭೆಯ ಎದುರಿನಲ್ಲಿ ನಿಲ್ಲಿಸಿದರು. ಆಗ ಮಹಾಯಾಜಕನು--
ಅಪೊಸ್ತಲರ ಕೃತ್ಯಗ 7:37
ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್ ಜನರಿಗೆ ಹೇಳಿದ ಆ ಮೋಶೆಯು ಇವನೇ.
ಅಪೊಸ್ತಲರ ಕೃತ್ಯಗ 17:18
ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ
1 ಕೊರಿಂಥದವರಿಗೆ 6:10
ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.
1 ಥೆಸಲೊನೀಕದವರಿಗೆ 4:6
ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ.
ತೀತನಿಗೆ 3:2
ಯಾರ ವಿಷಯವಾಗಿಯೂ ಕೆಟ್ಟ ಮಾತನ್ನಾಡದವರೂ ಜಗಳವಾಡದವರೂ ಆಗಿದ್ದು ಸಾಧು ಸ್ವಭಾವವುಳ್ಳವರಾಗಿ ಎಲ್ಲಾ ಮನುಷ್ಯರಿಗೆ ಪೂರ್ಣ ಸಾತ್ವಿಕತ್ವವನ್ನು ತೋರಿಸಬೇಕೆಂತಲೂ ಅವ ರಿಗೆ ಜ್ಞಾಪಕಮಾಡು.
ಇಬ್ರಿಯರಿಗೆ 5:9
ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
ಇಬ್ರಿಯರಿಗೆ 12:25
ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.
ಯಾಕೋಬನು 2:20
ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ?
1 ಯೋಹಾನನು 3:10
ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.
1 ಯೋಹಾನನು 5:16
ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ
ಯೂದನು 1:9
ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು.
1 ಕೊರಿಂಥದವರಿಗೆ 6:6
ಆದರೆ ಸಹೋದರನು ಸಹೋದರನ ಮೇಲೆ ವ್ಯಾಜ್ಯ ವಾಡುವದಲ್ಲದೆ ಅವಿಶ್ವಾಸಿಗಳ ಮುಂದೆಯೂ ಹೋಗುತ್ತಾನೆ.
ಆದಿಕಾಂಡ 4:5
ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು.
ಆದಿಕಾಂಡ 37:4
ತಮ್ಮ ತಂದೆಯು ಅವನನ್ನು ಅವನ ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿ ಮಾಡುತ್ತಾನೆಂದು ಅವನ ಸಹೋದರರು ನೋಡಿ ಅವನನ್ನು ದ್ವೇಷಿಸಿ ಅವನ ಸಂಗಡ ಸಮಾಧಾನವಾಗಿ ಮಾತಾಡಲಾರದೆ ಇದ್ದರು.
ಆದಿಕಾಂಡ 37:8
ಆಗ ಅವನ ಸಹೋದರರು ಅವನಿಗೆ--ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವಿಯೋ ಇಲ್ಲವೆ ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ ಎಂದು ಹೇಳಿ ಅವನ ಕನಸುಗಳಿಗಾಗಿಯೂ ಅವನ ಮಾತುಗಳಿಗಾಗಿಯೂ ಅವನನ್ನು ಮತ್ತಷ್ಟು ಹಗೆ ಮಾಡಿದರು.
1 ಸಮುವೇಲನು 17:27
ಜನರು ಆ ಮಾತಿಗೆ ಸರಿಯಾಗಿ--ಅವನನ್ನು ಕೊಂದವನಿಗೆ ಈ ಪ್ರಕಾರ ಮಾಡಲ್ಪಡುವದೆಂದು ಹೇಳಿದರು;
1 ಸಮುವೇಲನು 22:12
ಅವರೆಲ್ಲರೂ ಅರಸನ ಬಳಿಗೆ ಬಂದರು. ಆಗ ಸೌಲನು--ಅಹೀಟೂಬನ ಮಗನೇ, ಕೇಳು ಅಂದನು. ಅದಕ್ಕವನು--ಇಗೋ, ನನ್ನ ಒಡೆಯನೇ, ನಾನು ಇಲ್ಲಿದ್ದೇನೆ ಅಂದನು.
2 ಸಮುವೇಲನು 6:20
ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವದಕ್ಕೆ ಹೋದಾಗ ಸೌಲನ ಮಗಳಾದ ವಿಾಕಲಳು ದಾವೀದನಿಗೆ ಎದುರಾಗಿ ಬಂದು--ನಿಷ್ಪ್ರ ಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ ಹಾಗೆಯೇ ಈಹೊತ್ತು ತನ್ನ ಸೇವಕರ ದಾಸಿಗಳ ಕಣ್ಣುಮುಂದೆ ತನ್ನ ವಸ್ತ್ರ ಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಪಟ್ಟನು ಅಂದಳು.
2 ಸಮುವೇಲನು 16:7
ಶಿಮ್ಮಿ ಅವನನ್ನು ದೂಷಿಸುತ್ತಾ--ರಕ್ತದ ಮನುಷ್ಯನೇ, ಬೆಲಿಯಾಳನ ಮನುಷ್ಯನೇ, ಹೊರಟು ಬಾ, ಹೊರಟು ಬಾ.
1 ಅರಸುಗಳು 21:4
ನಾನು ನನ್ನ ಪಿತೃಗಳ ಬಾಧ್ಯತೆ ಯನ್ನು ನಿನಗೆ ಕೊಡುವದಿಲ್ಲವೆಂದು ಇಜ್ರೇಲ್ಯನಾದ ನಾಬೋತನು ಹೇಳಿದ ಮಾತಿಗೋಸ್ಕರ ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು ತನ್ನ ಮಂಚದ ಮೇಲೆ ಮಲಗಿ ತನ್ನ ಮುಖ ವನ್ನು ತಿರುಗಿಸಿಕೊಂಡು ರೊಟ್ಟಿ ತಿನ್ನದೆ ಇದ್ದನು.
2 ಪೂರ್ವಕಾಲವೃತ್ತಾ 16:10
ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.
ನೆಹೆಮಿಯ 5:8
ಅವ ರಿಗೆ--ಅನ್ಯರಿಗೆ ಮಾರಲ್ಪಟ್ಟ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿ ಇದ್ದ ಹಾಗೆ ವಿಮೋಚಿಸಿದೆವು. ನೀವು ನಿಮ್ಮ ಸಹೋದರರನ್ನು ಮಾರಿ ಬಿಡುವಿರೋ? ಇಲ್ಲವೆ ಅವರು ನಮಗೆ ಮಾರ ಲ್ಪಡುವರೋ ಅಂದೆನು. ಆಗ ಅವರು ಮೌನವಾಗಿ ದ್ದರು; ಅವರಿಗೆ ಮಾತು ಇಲ್ಲದೆ ಹೋಯಿತು.
ಎಸ್ತೇರಳು 3:5
ಮೊರ್ದೆಕೈ ತನಗೆ ಬೊಗ್ಗದೆ ಅಡ್ಡ ಬೀಳದೆ ಇರು ವದನ್ನು ಹಾಮಾನನು ನೋಡಿ ಕೋಪವುಳ್ಳವ ನಾದನು.
ಕೀರ್ತನೆಗಳು 14:1
ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
ಕೀರ್ತನೆಗಳು 25:3
ನಿನ್ನನ್ನು ನಿರೀಕ್ಷಿಸು ವವರಲ್ಲಿ ಯಾರೂ ಆಶಾಭಂಗಪಡದಿರಲಿ; ನಿಷ್ಕಾರಣ ವಾಗಿ ದ್ರೋಹ ಮಾಡುವವರು ನಾಚಿಕೆಗೊಳ್ಳಲಿ.
ಕೀರ್ತನೆಗಳು 35:19
ನನ್ನ ಶತ್ರುಗಳು ನನ್ನ ವಿಷ ಯದಲ್ಲಿ ಸುಳ್ಳಾಗಿ ಸಂತೋಷಪಡದೆ ಇರಲಿ; ಇಲ್ಲವೆ ನನ್ನನ್ನು ಕಾರಣವಿಲ್ಲದೆ ಹಗೆಮಾಡುವವರು ಕಣ್ಣು ಸನ್ನೆಮಾಡದೆ ಇರಲಿ.
ಕೀರ್ತನೆಗಳು 37:8
ಕೋಪವನ್ನು ನಿಲ್ಲಿಸು; ಉರಿಯನ್ನು ಬಿಟ್ಟುಬಿಡು; ಹೇಗಾದರೂ ಕೇಡುಮಾಡದ ಹಾಗೆ ಕೋಪಿಸಿಕೊಳ್ಳ ಬೇಡ.
ಕೀರ್ತನೆಗಳು 49:10
ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ.
ಕೀರ್ತನೆಗಳು 69:4
ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು.
ಕೀರ್ತನೆಗಳು 92:6
ಇದನ್ನು ಪಶುಪ್ರಾಯದವನಾದ ಮೂರ್ಖನು ಅರಿಯನು. ಇಲ್ಲವೆ ಹುಚ್ಚನು ತಿಳಿಯನು.
ಕೀರ್ತನೆಗಳು 109:3
ಹಗೆಯ ಮಾತು ಗಳಿಂದ ಅವರು ನನ್ನನ್ನು ಸುತ್ತಿಕೊಂಡು ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧಮಾಡಿದ್ದಾರೆ.
ಙ್ಞಾನೋಕ್ತಿಗಳು 14:16
ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ.
ಙ್ಞಾನೋಕ್ತಿಗಳು 18:6
ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.
ಧರ್ಮೋಪದೇಶಕಾಂಡ 18:18
ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.
1 ಸಮುವೇಲನು 20:30
ಆಗ ಸೌಲನು ಯೋನಾತಾನನ ಮೇಲೆ ಕೋಪಗೊಂಡು ಅವನಿಗೆ--ವಕ್ರವಾಗಿ ಎದುರು ಬೀಳುವ ಸ್ತ್ರೀಯ ಮಗನೇ, ನಿನಗೆ ನಾಚಿಕೆಯಾಗುವ ಹಾಗೆಯೂ ನಿನ್ನ ತಾಯಿಯ ಬೆತ್ತಲೆತನಕ್ಕೆ ನಾಚಿಕೆ ಯಾಗುವ ಹಾಗೆಯೂ ಇಷಯನ ಮಗನನ್ನು ನೀನು ಆದುಕೊಂಡಿದ್ದೀ ಎಂದು ನಾನರಿಯೆನೋ?
1 ಸಮುವೇಲನು 18:8
ಸೌಲನಿಗೆ ಬಹು ಕೋಪವಾಯಿತು; ಆ ಮಾತು ಅವನಿಗೆ ವ್ಯಸನಕರವಾಗಿತ್ತು. ಇವರು ದಾವೀದ ನಿಗೆ ಹತ್ತು ಸಾವಿರಗಳನ್ನು ಹೇಳಿದ್ದಾರೆ; ನನಗೆ ಸಾವಿರ ಗಳನ್ನು ಹೇಳಿದ್ದಾರೆ; ಅವನಿಗೆ ರಾಜ್ಯವಲ್ಲದೆ ಇನ್ನು ಹೆಚ್ಚು ಬೇಕಾದದ್ದೇನು ಅಂದನು.